ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಡಾ. ಲಕ್ಷ್ಮಣ ವಿ ಎ

ಡಾ. ಲಕ್ಷ್ಮಣ ವಿ ಎ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮೋಳೆ ಗ್ರಾಮದವರು. ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ​, ಅಪ್ಪನ ಅಂಗಿ ಎನ್ನುವ ಕವನ ಸಂಕಲನಗಳು, ಗರ್ದಿ ಗಮ್ಮತ್ತು ನೋಡ​..ss ಗೋಳ ಗುಮ್ಮಟ ನೋಡ​..ss, ಮಿಲ್ಟ್ರಿ ಟ್ರಂಕು ಅನ್ನುವ ಗದ್ಯ ಸಂಕಲನಗಳು ಇವರ ಕೃತಿಗಳು. ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ ಸಂಕಲನ ೨೦೧೬ರ ಕಣವಿ ಕಾವ್ಯ ಪುರಸ್ಕಾರಕ್ಕೆ ಭಾಜನವಾಗಿದ್ದರೆ, ಅಪ್ಪನ ಅಂಗಿ ಸಂಕಲನ ವಿಭಾ ಸಾಹಿತ್ಯ ಪ್ರಶಸ್ತಿಯಿಂದ ಪುರಸ್ಕೃತವಾಗಿದೆ.

ಪ್ರವಾಸ ಕಥನ ಅಂದರೆ ಅದು ಕೇವಲ ರಸ್ತೆಗಳಿಗೆ​, ದುಡ್ಡಿನ ಲೆಕ್ಕಾಚಾರಕ್ಕೆ ಸೀಮಿತವಾದ ಸಂಗತಿಯಲ್ಲ​. ಅದು ನಮ್ಮ ಪ್ರಕೃತಿ, ಬದುಕು, ಜನ​,…